Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    24ನೇ ವರ್ಷದ ಕೆಮ್ತೂರು ತುಳುನಾಟಕ ಪರ್ಬ ಉದ್ಘಾಟನೆ

    1 week ago

    ಉಡುಪಿ: ತುಳುನಾಡಿನಲ್ಲಿ ತುಳು ನಾಟಕದ ಆರಂಭವು ಚಳುವಳಿ ರೂಪದಲ್ಲಿಯೇ ಆರಂಭವಾಗಿತ್ತು.1910ನೇ ಇಸವಿಯಲ್ಲಿಯೇ ತುಳು ನಾಟಕ ಕೂಟವನ್ನು ಕಟ್ಟಿಕೊಂಡು ಜನಜಾಗೃತಿ ಮೂಡಿಸುವ...

    The post 24ನೇ ವರ್ಷದ ಕೆಮ್ತೂರು ತುಳುನಾಟಕ ಪರ್ಬ ಉದ್ಘಾಟನೆ first appeared on Udupi Times.



    ಉಡುಪಿ: ತುಳುನಾಡಿನಲ್ಲಿ ತುಳು ನಾಟಕದ ಆರಂಭವು ಚಳುವಳಿ ರೂಪದಲ್ಲಿಯೇ ಆರಂಭವಾಗಿತ್ತು.1910ನೇ ಇಸವಿಯಲ್ಲಿಯೇ ತುಳು ನಾಟಕ ಕೂಟವನ್ನು ಕಟ್ಟಿಕೊಂಡು ಜನಜಾಗೃತಿ ಮೂಡಿಸುವ ಕೆಲಸ ಮಾಡಿತ್ತು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ತಿಳಿಸಿದರು.

    ಅವರು ಇಂದು ಎಂ.ಜಿ.ಎಂ.ಕಾಲೇಜಿನ ಮುದ್ದಣ ಮಂಟಪದಲ್ಲಿ ತುಳುಕೂಟ ಉಡುಪಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಜಂಟಿ ಆಶ್ರಯದಲ್ಲಿ ನಡೆದ 24ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಇವರ ನೆನಪಿನಲ್ಲಿ ನಡೆದ ಕೆಮ್ತೂರು ತುಳುನಾಟಕ ಪರ್ಬವನ್ನು ಉದ್ಘಾಟಿಸಿ ಮಾತನಾಡಿದರು.

    ತುಳು ಕೂಟದ ಸ್ಥಾಪಕ ಅಧ್ಯಕ್ಷ ಭಾಸ್ಕರಾನಂದ ಕುಮಾರ್ ಇವರು ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಎಮ್.ಜಿ.ಎಮ್.ಕಾಲೇಜಿನ ಪ್ರಾಂಶುಪಾಲೆ ವನಿತ ಮಯ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ನಾಗೇಶ್ ಕುಮಾರ್ ಉದ್ಯಾವರ, ತುಳುಕೂಟದ ಉಪಾಧ್ಯಕ್ಷ ದಿವಾಕರ ಸನಿಲ್, ಶೋಭಾ ಶೆಟ್ಟಿ, ಕೆಮ್ತೂರು ಕುಟುಂಬದ ಪರವಾಗಿ ವಿಜಯ್ ಕುಮಾರ್ ಶೆಟ್ಟಿ, ತುಳುಕೂಟದ ಕೋಶಾಧಿಕಾರಿ ಚೈತನ್ಯ ಎಮ್.ಜಿ., ಗೌರವ ಸಲಹೆಗಾರ ವಿಶ್ವನಾಥ ಶೆಣೈ ಉಪಸ್ಥಿತರಿದ್ದರು.

    ಕೆಮ್ತೂರು ನಾಟಕ ಸ್ಪರ್ಧೆಯ ಸಂಚಾಲಕ ಕೆ.ಪ್ರಭಾಕರ ಭಂಡಾರಿ ನಾಟಕದ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ಭುವನ ಪ್ರಸಾದ್ ಹೆಗ್ಡೆ ಸ್ವಾಗತಿಸಿದರು. ಕಾರ್ಯದರ್ಶಿ ಗಂಗಾಧರ ಕಿದಿಯೂರು ಧನ್ಯವಾದವಿತ್ತರು.ವಿ.ಕೆ.ಯಾದವ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಭಾ ಕಾರ್ಯಕ್ರಮದ ಬಳಿಕ ಕಲಾಮಂದಿರ ಉಡುಪಿ ಇವರಿಂದ ಪ್ರಥಮ ದಿನದ ನಾಟಕ ಪಿಲಿ ಪ್ರದರ್ಶನಗೊಂಡಿತು.

    The post 24ನೇ ವರ್ಷದ ಕೆಮ್ತೂರು ತುಳುನಾಟಕ ಪರ್ಬ ಉದ್ಘಾಟನೆ first appeared on Udupi Times.

    Click here to Read More
    Previous Article
    ಅರಿವಿನ ಶಿಕ್ಷಣವನ್ನು ನಿರಾಕರಿಸಲ್ಪಟ್ಟ ಸಮುದಾಯದವರ ಬಾಳಿನ ಬೆಳಕು ಸಾವಿತ್ರಿ ಬಾಯಿ ಫುಲೆ: ಡಾ. ಮಹೇಶ್‍ ಕುಮಾರ್‍ ಕೆ.ಇ
    Next Article
    ಉಡುಪಿ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ: ಸುತ್ತುಪೌಳಿಯಲ್ಲಿನ ದಾರಂದ ಮುಹೂರ್ತ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment